ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸಿಂದಗಿ ಹಾಗೂ ಆಲಮೇಲ ತಾಲೂಕುಗಳಿಗೆ ತಲಾ 1 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ ಎಂದು, ಎಂಎಲ್ ಸಿ ಅರುಣ ಶಹಾಪೂರ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಎಂ.ಸಿ ಮನಗೂಳಿ ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿದೆ. ಇದ್ರಿಂದಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಹಣ ಬಳಕೆ ಮಾಡಿಕೊಳ್ಳುವುದಕ್ಕೂ ಕೊರತೆ ಉಂಟಾಗಿದೆ. ಸಿಂದಗಿ ಹಾಗೂ ಆಲಮೇಲ ತಾಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ತಲಾ 1 ಕೋಟಿ ರೂಪಾಯಿ ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.