ಸಿಂದಗಿ, ಆಲಮೇಲಗೆ ವಿಶೇಷ ಅನುದಾನ ನೀಡಿ: ಅರುಣ ಶಹಾಪೂರ

277

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸಿಂದಗಿ ಹಾಗೂ ಆಲಮೇಲ ತಾಲೂಕುಗಳಿಗೆ ತಲಾ 1 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ ಎಂದು, ಎಂಎಲ್ ಸಿ ಅರುಣ ಶಹಾಪೂರ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಎಂ.ಸಿ ಮನಗೂಳಿ ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿದೆ. ಇದ್ರಿಂದಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಹಣ ಬಳಕೆ ಮಾಡಿಕೊಳ್ಳುವುದಕ್ಕೂ ಕೊರತೆ ಉಂಟಾಗಿದೆ. ಸಿಂದಗಿ ಹಾಗೂ ಆಲಮೇಲ ತಾಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ತಲಾ 1 ಕೋಟಿ ರೂಪಾಯಿ ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!