ಪ್ರಜಾಸ್ತ್ರ ಸುದ್ದಿ
ಕೊಡಗು: ನೆರೆಯಿಂದ ಉಂಟಾಗಿರುವ ಹಾನಿಯ ಕುರಿತು ವೀಕ್ಷಣೆಗೆ ಬಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಗೋ ಬ್ಯಾಕ್ ಪ್ರತಿಭಟನೆಯ ಬಿಸಿ ತಟ್ಟಿದೆ. ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ, ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯನವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದರು. ಗೋಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. ಸಾವರ್ಕರ್ ಫೋಟೋವನ್ನು ಕಾರಿನೊಳಗೆ ಹಾಕಿದರು. ಮತಾಂಧ ಟಿಪ್ಪು ಜಯಂತಿ ಆಚರಣೆಗೆ ತಂದ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದು ಬೇಡ ಎಂದು ಧಿಕ್ಕಾರ ಕೂಗಿದರು.