ಹೊರಗಿನವರು ಬಂದು ಗೋಬ್ಯಾಕ್ ಎನ್ನುತ್ತಿದ್ದಾರೆ: ಕರಂದ್ಲಾಜೆ

82

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಗೆಲ್ಲಿಸಿದ್ದಾರೆ. ಆದ್ರೆ, ಹೊರಗಿನವರು ಬಂದು ಗೋಬ್ಯಾಕ್ ಎನ್ನುತ್ತಿದ್ದಾರೆ. ಹೀಗೆ ಮಾಡುವುದು ಒಳ್ಳೆಯದಲ್ಲ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೇರೆಯವರು ಟಿಕೆಟ್ ಕೇಳುವುದು ತಪ್ಪಲ್ಲ. ಹಾಲಿ ಸಂಸದೆಗೆ ಅವಮಾನ ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ನನಗೆ ಎಲ್ಲೆ ಟಿಕೆಟ್ ಕೊಟ್ಟರೂ ಹೋರಾಟ ಮಾಡುತ್ತೇನೆ. ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದು ಹಿರಿಯರು ನಿರ್ಧರಿಸುತ್ತಾರೆ. ಒಮ್ಮೆ ಟಿಕೆಟ್ ಕೊಟ್ಟರೆ ಮುಗಿಯಿತು. ಅವರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದರು.

ನಾಳೆ ಅಥವ ನಾಡಿದ್ದು 2ನೇ ಸುತ್ತಿನ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಗೆಲ್ಲುವ ಕ್ಷೇತ್ರವಾಗಿರುವುದರಿಂದ ಟಿಕೆಟ್ ಗಾಗಿ ಬೇಡಿಕೆ ಇದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಹತ್ತಾರು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!