ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಬಂಗಾರದ ಅಂಗಡಿಗೆ ಗ್ರಾಹಕರ ವೇಷದಲ್ಲಿ ಬಂದು ಚಿನ್ನದ ಸರ ಕೊರಳಲ್ಲಿ ಹಾಕಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ರೋಹಿತ್(24) ಬಂಧಿತ ಕಳ್ಳನಾಗಿದ್ದಾನೆ.
ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ 45 ಗ್ರಾಂ ಚಿನ್ನದ ಸರವನ್ನು ಹಾಕಿಕೊಂಡು ಎಸ್ಕೇಪ್ ಆಗಿದ್ದ. ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆಯಲಾಗಿದೆ. ಯಶವಂತಪುರದ ಸುಬೇದಾರಪಾಳ್ಯ ನಿವಾಸಿ ರೋಹಿತ್ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದ. ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.