ಚಿನ್ನದ ವ್ಯಾಪಾರಿ ಕೊಲೆ: ಇಬ್ಬರ ಬಂಧನ

164

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ನಗರ್ತಪೇಟೆಯಲ್ಲಿ ಚಿನ್ನಾಭರಣದ ವ್ಯಾಪಾರ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ಅಖ್ತರ್ ಅಲಿ ಎಂಬಾತನನ್ನು ಕೊಲೆ ಮಾಡಲಾಗಿದೆ. ಈ ಘಟನೆ ನಡೆದು 24 ಗಂಟೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಹನವಾಜ್ ಸೇರಿ ಇಬ್ಬರ ಬಂಧನವಾಗಿದೆ. ಕೊಲೆಯಾದ ಮೊಹಮ್ಮದ್, ತಮ್ಮ ಮನೆಯ ಹತ್ತಿರದ ಯುವತಿಯೊಂದಿಗೆ ಸ್ನೇಹ ಹೊಂದಿದ್ದ. ಇದು ತಿಳಿದ ಯುವತಿಯ ಅಕ್ಕನ ಗಂಡ ಮೊಹಮ್ಮದ್ ಕೊಲೆಗೆ ಸಂಚು ರೂಪಿಸಿದ್ದಾನೆ. ಚಿನ್ನದ ಗಟ್ಟಿಯನ್ನು ಕಡಿಮೆ ರೇಟಿನಲ್ಲಿ ಕೊಡುವುದಾಗಿ ಹೇಳಿ ಆತನನ್ನು ಕರೆಸಿಕೊಂಡಿದ್ದಾರೆ.

ವರ್ತೂರು ಹತ್ತಿರದ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಕುತ್ತಿಗೆಗೆ ಹಗ್ಗ ಬಿಗಿದು, ಹೊಟ್ಟೆಗೆ ಚಾಕುವಿನಿಂದ ನಾಲ್ಕು ಬಾರಿ ಇರಿದು ಕೊಲೆ ಮಾಡಿದ್ದಾರೆ. ನಂತರ ಶವವನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿ ನದಿಯಲ್ಲಿ ಎಸೆದಿದ್ದಾರೆ. ಹಲಸೂರು ಗೇಟ್ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!