ಪ್ರಜಾಸ್ತ್ರ ಸುದ್ದಿ
ಮಂಗಳೂರು: ಬಂಗಾರದ ಅಂಡಿಯ ಸಿಬ್ಬಂದಿಗೆ ಚೂರಿಯಿಂದ ಇರಿದ ಘಟನೆ ಹಂಪನಕಟ್ಟೆ ಮಿಲಾಗ್ರಿಸ್ ಹತ್ತಿರ ನಡೆದಿದೆ. ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಗಡಿಯ ಮಾಲೀಕ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಓರ್ವ ಮುಸುಕುಧಾರಿ ಅಂಗಡಿಯಿಂದ ಹೊರಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಡಿಸಿಪಿ ಸೇರಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.