ಪ್ರಜಾಸ್ತ್ರ ಅಪರಾಧ ಸುದ್ದಿ
ಉತ್ತರ ಕನ್ನಡ: ಚಿನ್ನದ ಅಂಗಡಿಯ ಗೋಡೆ ಕೊರೆದು ಕಳ್ಳತನ ಮಾಡಿರುವ ಮಾಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಎಂಬುವರಿಗೆ ಸೇರಿರುವ ಗೋಲ್ಡ್ ಕಿಂಗ್ ಜ್ಯುವೆಲರ್ ಶಾಪ್ ಗೆ ಕಳ್ಳರು ಕನ್ನ ಹಾಕಿದ್ದಾರೆ.
ಕಳ್ಳರು ಗೋಡೆ ಕೊರೆದು ಅಂಗಡಿಯೊಳಗೆ ನುಗ್ಗಿರುವುದು ಸೈರನ್ ಮೂಲಕ ಮೊಬೈಲ್ ಗೆ ಸಂದೇಶ ಬಂದಿದೆ. 10 ನಿಮಿಷದೊಳಗೆ ಮಾಲೀಕ ಅಂಗಡಿಗೆ ಬರುವಷ್ಟರಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಹೋಗಿದ್ದಾರೆ. ಇದ್ರಿಂದಾಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.
ಸ್ಥಳಕ್ಕೆ ಕೊಣಾಜಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.