ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಸಿಐಡಿ ತನಿಖೆ ಶುರು

311

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಹೋದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಕಿರುಗುಂದ ಗ್ರಾಮದ ಕೆ.ಎಲ್ ಪುನೀತ ನೀಡಿದ ದೂರಿನ ಮೇರೆಗೆ ತನಿಖೆ ಶುರುವಾಗಿದೆ.

ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್, ಎಸ್ಪಿ ಅಕ್ಷಯ ಎಂ.ಹಾಕೆ ಹಾಗೂ ಸಿಐಡಿ ತಂಡ ಗೋಣಿಬೀಡು ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಪಿಎಸ್ಐ ಅರ್ಜುನ, ಪುನೀತ ಅನ್ನೋ ದಲಿತ ಯುವಕನಿಗೆ ಮೂತ್ರ ಕುಡಿಸಿರುವ ಆರೋಪವಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಅವರನ್ನ ಅಮಾನತುಗೊಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!