10 ದಿನದಲ್ಲಿ ಖಾಕಿ ಪಡೆಗೆ ಗುಡ್ ನ್ಯೂಸ್

360

ಬೆಂಗಳೂರು: ಇನ್ನು ಕೇವಲ 10 ದಿನಗಳಲ್ಲಿಯೇ ಪೊಲೀಸರಿಗೆ ಸಿಹಿ ಸುದ್ದಿ ಕೊಡುವುದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಔರಾದ್ಕರ್ ಸಿಮಿತಿಯ ವರದಿಯನ್ನ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ, ಗೃಹ ಸಚಿವ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ.

ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆ, ಕಾರಾಗೃಹ ಸಿಬ್ಬಂದಿಗಳ ವೇತನದ ಬಗ್ಗೆ ಸಿಎಂ ಸಂಪೂರ್ಣ ವರದಿ ಕೇಳಿದ್ದಾರೆ. ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಗೃಹ ಸಚಿವ ಎಂ.ಬಿ ಪಾಟೀಲ್

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತ್ನಾಡಿದ ಗೃಹ ಸಚಿವರು,ಔರಾಧಕರ್ ಸಮಿತಿಯ ವಿಷಯಗಳ ಕುರಿತು ಚರ್ಚಿಸಲಾಗಿದೆ. ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಅನುಮೋದನೆ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಿಎಂ ಅವರು ವರದಿಯಲ್ಲಿನ ಶಿಫಾರಸ್ಸುಗಳನ್ನು ಪರಿಗಣಿಸಲು ನಿರ್ಧರಿಸಿದ್ದು, 10 ದಿನಗಳೊಳಗೆ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದು ಕೊಡುವುದಾಗಿ ತಿಳಿಸಿದ್ರು.


TAG


Leave a Reply

Your email address will not be published. Required fields are marked *

error: Content is protected !!