ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಗೂಳಿಹಟ್ಟಿ ಶೇಖರಗೆ ಆದ ಅನುಭವ ನನಗೂ ಆಗಿದೆ ಎಂದಿದ್ದಾರೆ.
ನಾನು ಹಿಂದೆ ಬಿಜೆಪಿಯಲ್ಲಿದ್ದೆ. ಹಲವು ಸಭೆಗಳಿಗೆ ನನಗೂ ಆಹ್ವಾನ ನೀಡುತ್ತಿರಲಿಲ್ಲ. ಇದಕ್ಕೆ ಸರಿಯಾಗಿ ಕಾರಣ ಸಹ ನೀಡುತ್ತಿರಲಿಲ್ಲ. ಗೂಳಿಹಟ್ಟಿ ಶೇಖರ್ ಹೇಳಿಕೆ ಬಳಿಕ ನನಗೂ ಈಗ ಮನವರಿಕೆಯಾಗುತ್ತಿದೆ ಅಂತಾ ಹೇಳಿದ್ದಾರೆ.