ಉಚಿತ ಮಣ್ಣಿನ ಗಣಪ ವಿತರಣೆ

226

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಬ್ಯಾಟರಾಯನಪುರ ಘಟಕದ ಬಿಜೆಪಿ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಗಣೇಶಮೂರ್ತಿಗಳನ್ನು ವಿತರಣೆ ಮಾಡಲಾಗುತ್ತಿದೆ. ದೊಡ್ಡಬೊಮ್ಮಸಂದ್ರದಲ್ಲಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ ಪರಿಸರಸ್ನೇಹಿ ಗಣೇಶಮೂರ್ತಿಗಳನ್ನು ನೀಡುತ್ತಿದ್ದಾರೆ.

ದೊಡ್ಡಬೊಮ್ಮಸಂದ್ರ ವಾರ್ಡಿನಲ್ಲಿ ಮಣ್ಣಿನ ಗಣಪತಿ ಹಾಗೂ ಗೌರಿ ಮೂರ್ತಿ ನೀಡುವ ಮೂಲಕ ಪರಿಸರ ಉಳಿಸುವ ಮೂರ್ತಿ ಪೂಜಿಸಿ ವಿಸರ್ಜನೆ ಮಾಡಬೇಕು ಎಂದು ಹೇಳಲಾಗುತ್ತಿದೆ. ಈ ವೇಳೆ ಬೆಂಗಳೂರು ಉತ್ತರ ವಲಯದ ಬಿಜೆಪಿ ಅಧ್ಯಕ್ಷ, ಬಿಎಂಟಿಸಿ ನಿರ್ದೇಶಕ ಟಿ.ಪಿ ಪ್ರಕಾಶ್, ಪಾಲಿಕೆ ಮಾಜಿ ಸದಸ್ಯರು ಸೇರಿ ಅನೇಕರು ಭಾಗವಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!