ಬೆಂಗಳೂರು: ಸರ್ಕಾರಿ ವೈದ್ಯರಾಗಿದ್ದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವುದು ಕಂಡು ಬಂದ್ರೆ, ಅಂತಹ ವೈದ್ಯರ ವಿರುದ್ಧ ಕಠಿಣ ಕ್ರಮಕೈಗೊಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತ್ನಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಸೇವೆಯಿಂದಲೇ ಅಂತವರನ್ನ ವಜಾ ಮಾಡುವುದಾಗಿ ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಮಾತ್ನಾಡಿದ ಆರೋಗ್ಯ ಸಚಿವರು, ಸರ್ಕಾರಿ ವೈದ್ಯರು ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಕಂಡು ಬಂದ್ರೆ ಕಠಿಣ ಕ್ರಮ ಕೈಗೊಳ್ಳಲು ಹಿಂದುಮುಂದು ನೋಡುವುದಿಲ್ಲವೆಂದು ಮಾಧ್ಯಮಗಳ ಎದುರು ತಿಳಿಸಿದ್ದಾರೆ. ಸರ್ಕಾರಿ ವೈದ್ಯರು ಸರಿಯಾದ ಟೈಂಗೆ ಆಸ್ಪತ್ರೆಗೆ ಬಾರದೆ ಇರುವುದು, ಕರ್ತವ್ಯದ ಟೈಂನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸ್ತಿರುವುದು ಗಮನಕ್ಕೆ ಬಂದಿದೆ. ಈಗಾಗ್ಲೇ ಕೆಲ ಅಧಿಕಾರಿಗಳ ಜೊತೆ ಮಾತ್ನಾಡಿದ್ದು, ಆಸ್ಪತ್ರೆಗೆ ಬಾರದೆ ಇರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.