ರಾಜ್ಯ ಸರ್ಕಾರ ಮಲಗಿಕೊಂಡಿದೆ: ಸಂತೋಷ್ ಲಾಡ್ ಲೇವಡಿ

223

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಕೆಲಸಗಳಾಗುತ್ತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಮಲಗಿಕೊಂಡಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಸಂತೋಷ ಲಾಡ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿಯಿಂದ ಬೆಳೆ ಹಾನಿ ಅನುಭವಿಸಿದ ಹಾಗೂ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಇನ್ನೂ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಕೂಡಲೇ ಅವರಿಗೆ ಪರಿಹಾರ ನೀಡಬೇಕು ಎಂದರು.

ಪ್ರತಿ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ಹೊಸ ಯೋಜನೆಗಳನ್ನೇ ಘೋಷಣೆ ಮಾಡುತ್ತಾರೆ. ಆದರೆ, ಯಾವುದು ಕಾರ್ಯರೂಪಕ್ಕೆ ಬಂದಿಲ್ಲ. ಮೊದಲು 100 ಸ್ಮಾರ್ಟ್ ಸಿಟಿ, ಬುಲೆಟ್ ಟ್ರೇನ್, ಮೇಕ್ ಇನ್ ಇಂಡಿಯಾ ಎಲ್ಲವನ್ನೂ ಮರೆತಿದ್ದಾರೆ. ನನ್ನ ಮಾಹಿತಿ ಪ್ರಕಾರ 4 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದರು.

ಇಂಡಸ್ಟ್ರೀಯಲ್ ಕಾರಿಡಾರ್‌ಗೆ ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತಿದ್ದು, ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರದ ಜೊತೆಗೆ ಅವರ ಕುಟುಂಬದ ಸದಸ್ಯನೊಬ್ಬನಿಗೆ ಕೆಲಸ ಕೊಡಬೇಕು. ಅಳ್ನಾವರ ಭಾಗದಲ್ಲಿ ರೈಲ್ವೆ ಕ್ರಾಸಿಂಗ್‌ನಲ್ಲಿ ಓವರ್ ಬ್ರಿಜ್ ಆಗಬೇಕು. ದಿನದಲ್ಲಿ 10-11 ಬಾರಿ ಗೇಟ್ ಹಾಕುವುದರಿಂದ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಡಿಸಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಂತೋಷ್ ಲಾಡ್ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!