ಗೋಹತ್ಯೆ ನಿಷೇಧ: ವಿಜಯಪುರದಲ್ಲಿ ಸಂಭ್ರಮಾಚರಣೆ

249

ಪ್ರಜಾಸ್ತ್ರ ಸುದ್ದಿ

ವಿಜಯಪುರ: ರಾಜ್ಯ ಸರ್ಕಾರ ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಸೂದೆಯನ್ನ ಮಂಡಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಹಿಂದೂಪರ ಸಂಘಟನೆಗಳು ನಗರದಲ್ಲಿ ಸಂಭ್ರಮಾಚರಣೆ ಮಾಡಿವೆ.

ನಗರದ ಶಿವಾಜಿ ವೃತ್ತದಲ್ಲಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರ ಜೈಕಾರ ಹಾಕಿದರು. ಗೋವುಗಳ ದೇವರು ಇದ್ದಂತೆ. ಅವುಗಳು ಹತ್ಯೆಗೈಯದಂತೆ ವಿಧೇಯಕ ಮಂಡಿಸಿರುವ ಸಚಿವ ಪ್ರಭು ಚವ್ಹಾಣ ಹಾಗೂ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಅಭಿನಂದನೆಗಳು ಎಂದು ಮುಖಂಡರು ತಿಳಿಸಿದ್ರು.




Leave a Reply

Your email address will not be published. Required fields are marked *

error: Content is protected !!