ಪ್ರಜಾಸ್ತ್ರ ಸುದ್ದಿ
ಗದಗ: ರಾಜ್ಯದಲ್ಲಿ ಭಾನುವಾರ ಗ್ರಾಮ ಪಂಚಾಯ್ತಿ ಚುನಾವಣೆಯ 2ನೇ ಹಂತದ ಮತದಾನ ಶುರುವಾಗಿದೆ. ಇದರ ನಡುವೆ ವೋಟಿಂಗ್ ಮಾಡಲು ಬಂದ ಜಿಲ್ಲಾ ಪಂಚಾಯ್ತಿ ಸದಸ್ಯರೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗನಲ್ಲಿ ನಡೆದಿದೆ.
ರೋಣ ತಾಲೂಕಿನ ಮೆಣಸಗಿ ಗ್ರಾಮದ ಸಂಖ್ಯೆ 105ರಲ್ಲಿ ಮತದಾನ ಮಾಡಲು ಬಂದ ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಎಂಬುವರ ಮೇಲೆ ಕಾಂಗ್ರೆಸನ ಹಿರೇಗೌಡ ಸಹೋದರರು ಏಕಾಏಕಿ ಹಲ್ಲೆ ಮಾಡಿದ್ರು ಎಂದು ಆರೋಪಿಸಲಾಗಿದೆ.
ಈ ಘಟನೆಯಿಂದಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ. ನಂತರ ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ್ದಾರೆ.