ಬ್ರೇಕಿಂಗ್ ನ್ಯೂಸ್
Search

ಕಾಂಗ್ರೆಸ್-ಜೆಡಿಎಸ್ ಸದಸ್ಯರ ನಡುವೆ ಡಿಶುಂ ಡಿಶುಂ

218

ಪ್ರಜಾಸ್ತ್ರ ಸುದ್ದಿ

ಮಂಡ್ಯ: ತಾಲೂಕಿನ ಹಲ್ಲೆಗೆರೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ಮಾರಾಮಾರಿ ನಡೆದಿದೆ. ಎರಡೂ ಪಕ್ಷದ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂಬಂಧ ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ತೀವ್ರ ಜಿದ್ದಾಜಿದ್ದು ನಡೆದಿದೆ. ಈ ವೇಳೆ ತಳ್ಳಾಟ, ನೂಕಾಟ ನಡೆದಿದೆ. ಇದು ವಿಕೋಪಕ್ಕೆ ಹೋಗಿ ಕೈ ಕೈ ಮೀಲಾಯಿಸುವ ಮಟ್ಟಕ್ಕೆ ಬಂದಿದೆ. ಸ್ಥಳದಲ್ಲಿ ಪೊಲೀಸರು ಇದ್ದರೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಚುನಾವಣೆ ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!