ಗ್ರಾ.ಪಂ ಸದಸ್ಯ ಆತ್ಮಹತ್ಯೆ?

249

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಾಲೂಕಿನ ಗಂಜಿಮಠ ಗ್ರಾಮ ಪಂಚಾಯ್ತಿ ಸದಸ್ಯ ಸಂದೀಪ್ ಶೆಟ್ಟಿ ಮೊಗರು ಅನ್ನೋರ ಶವ ಪತ್ತೆಯಾಗಿದೆ.

ಮೃತ ಸಂದೀಪ್ ಬುಧುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ವಿಮಾ ಏಜೆಂಟ್ ಆಗಿಯೂ ಕೆಲಸ ಮಾಡುತ್ತಿದ್ದ ಇವರು ಬಿಜೆಪಿ ಕಾರ್ಯಕರ್ತರಾಗಿದ್ದರು. 35 ವರ್ಷದ ಸಂದೀಪ್ ಅವಿವಾಹಿತರಾಗಿದ್ದು, ಹಣಕಾಸಿನ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ವೇಳೆ ಡೆತ್ ನೋಟ್ ಸಹ ಸಿಕ್ಕಿದ್ದು, ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಸಾವಿನ ಸತ್ಯ ತಿಳಿದು ಬರಲಿದೆ.




Leave a Reply

Your email address will not be published. Required fields are marked *

error: Content is protected !!