ಪಿಡಿಓಗೆ ಮುತ್ತಿಟ್ಟ ಸದಸ್ಯ.. ವರದಿ ಕೇಳಿದ ಜಿ.ಪಂ ಸಿಇಓ

378

ಪ್ರಜಾಸ್ತ್ರ ಸುದ್ದಿ

ತುಮಕೂರು: ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತವರು ಕ್ಷೇತ್ರದಲ್ಲಿ ಪಿಡಿಓಗೆ ಗ್ರಾಮ ಪಂಚಾಯ್ತಿ ಸದಸ್ಯ ಮುತ್ತಿಕ್ಕಿದ ಪ್ರಕರಣ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧ ಜಿಲ್ಲಾ ಪಂಚಾಯ್ತಿ ಸಿಇಓ, ತಾಲೂಕು ಪಂಚಾಯ್ತಿ ಇಓಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿಪುರ ಗ್ರಾಮ ಪಂಚಾಯ್ತಿಯಲ್ಲಿನ ಮಹಿಳಾ ಪಿಡಿಓಗೆ ಗ್ರಾಮ ಪಂಚಾಯ್ತಿ ಸದಸ್ಯ ಪ್ರಸನ್ನಕುಮಾರ್ ಬಲವಂತಾಗಿ ಕೈಗೆ ಮುತ್ತಿಟ್ಟಿದ್ದರು. ಅಲ್ಲದೆ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಇದು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಲ್ಲದೆ ಎಲ್ಲೆಡೆ ವೈರಲ್ ಆಗಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ತಾ.ಪಂ ಇಓಗೆ ಜಿ.ಪಂ ಸಿಇಓ ಡಾ.ವಿದ್ಯಾಕುಮಾರಿ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!