ಪ್ರಜಾಸ್ತ್ರ ಅಪರಾಧ ಸುದ್ದಿ
ಮುಂಡಗೋಡ: ತಾಲೂಕಿನ ಪಾಳ ಗ್ರಾಮ ಪಂಚಾಯ್ತಿ ಸದಸ್ಯೆಯನ್ನು ಬುಧವಾರ ಹತ್ಯೆ ಮಾಡಲಾಗಿದೆ. ಅಕ್ಕಮ್ಮ ಬಸವರಾಜ ಮೇಲಿನಮನಿ ಕೊಲೆಯಾದ ಗ್ರಾಮ ಪಂಚಾಯ್ತಿ ಸದಸ್ಯೆಯಾಗಿದ್ದಾಳೆ.
ಅಕ್ಕಮ್ಮ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಗೆ ಕಾರಣ ಏನು ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಿಪಿಐ, ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.