ಪ್ರಜಾಸ್ತ್ರ ಅಪರಾಧ ಸುದ್ದಿ
ಧಾರವಾಡ: ತಾಲೂಕಿನ ಕೋಟೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ಕಮ್ಮಾರ(36) ಎಂಬುವರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆಯಂತೆ.
ಗ್ರಾಮದ ಉಡಚಮ್ಮದೇವಿ ಜಾತ್ರೆಯ ವೇಳೆ ಪ್ರಸಾದ ಹಂಚುವ ಸಂದರ್ಭದಲ್ಲಿ ಜಗಳ ನಡೆದಿದೆ. ಪ್ರವೀಣ ಜಗಳ ಬಿಡಿಸಿ ಕಳಿಸಿದ್ದಾನೆ. ಮತ್ತೆ ಬಂದ ತಂಡವೊಂದು ಪ್ರವೀಣಗೆ ಚಾಕುವಿನಿಂದ ಇರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ನಾಲ್ವರಿಂದ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಸ್ಪಿ ಲೋಕೇಶ ಜಗಲಾಸರ್ ಗ್ರಾಮಕ್ಕೆ ಭೇಟಿ ನೀಡಿ ಬಂದೋಬಸ್ತಿ ಮಾಡಲಾಗಿದೆ. ಚುನಾವಣೆ ದಿನವಾಗಿರುವುದರಿಂದ ಇದು ರಾಜಕೀಯ ಸ್ವರೂಪ ಪಡೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.