ಗ್ರಾಮವಾಸ್ತವ್ಯ ಶೂನ್ಯ ಸಂಪಾದನೆ ಕಿರುಪುಸ್ತಕ

375

ಬೆಂಗಳೂರು: ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ‘ಗ್ರಾಮ ವಾಸ್ತವ್ಯ ಶೂನ್ಯ ಸಾಧನೆ’ ಎಂಬ ಕಿರುಹೊತ್ತಿಗೆಯನ್ನ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬಿಡುಗಡೆಗೊಳಿಸಿದ್ರು. ಅಂದು ಗ್ರಾಮವಾಸ್ತವ್ಯ ಶೂನ್ಯ ಸಾಧನೆ. ಈವರೆಗೆ ಸ್ಟಾರ್ ಹೋಟೆಲ್ ನಿಂದ ಆಡಳಿತ ಖಜಾನೆ ಲೂಟಿ.. ಇಂದು ಗ್ರಾಮವಾಸ್ತವ್ಯ ಡ್ರಾಮ ಅಂತಾ ಆರೋಪ ಮಾಡಿದ್ದಾರೆ.

13 ತಿಂಗಳ ಆಡಳಿತ ಅವಧಿಯ ವೈಫಲ್ಯಗಳ ಕುರಿತು ಸಿಎಂಗೆ ಹತ್ತು ಪ್ರಶ್ನೆಗಳನ್ನು ಕೇಳುವ ಮೂಲಕ ಸವಾಲು ಹಾಕಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಮಾಲಕರೆಡ್ಡಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ತಮ್ಮೇಶ ಗೌಡ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್. ಶಾಂತಾರಾಮ್, ರಾಜ್ಯ ಬಿಜೆಪಿ ಸಹವಕ್ತಾರ ಎ.ಹೆಚ್. ಆನಂದ ಸೇರಿ ಹಲವರು ಉಪಸ್ಥಿತರಿದ್ದರು.


TAG


Leave a Reply

Your email address will not be published. Required fields are marked *

error: Content is protected !!