ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಒಂದು ನಾಟಕ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಅಧಿಕಾರಿಗಳು ಮಾಡೋ ಕೆಲಸವನ್ನ ಸಿಎಂ ಮಾಡುತ್ತಿದ್ದಾರೆ. ಒಂದು ಗ್ರಾಮಕ್ಕೆ ಹೋಗಿ ವಾಸ್ತವ್ಯ ಮಾಡಿದರೆ ಅಭಿವೃದ್ಧಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಕೇವಲ ಅರ್ಜಿಗಳನ್ನು ತೆಗೆದುಕೊಂಡು ಬಂದರೆ ಏನ್ ಆಗತ್ತೆ. ಅದು ಅಧಿಕಾರಿಗಳು ಮಾಡೋ ಕೆಲಸ ಎಂದು ಸಿಎಂ ವಿರುದ್ಧ ಹರಿಹಾಯ್ದರು. ಮೊದಲು ಸಿಎಂ ಕಟ್ಟುನಿಟ್ಟಿನ ಆಡಳಿತ ನಡೆಸಲಿ. ತಮ್ಮಲ್ಲಿನ ಒಳ ಜಗಳವನ್ನ ಬಗೆಹರಿಸಲಿ. ಅದು ಬಿಟ್ಟು ಗ್ರಾಮವಾಸ್ತವ್ಯ ಅಂತ ನಾಟಕ ಮಾಡಿದರೆ ಏನು ಅಭಿವೃದ್ಧಿಯಾಗಲ್ಲ ಅಂತಾ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.