ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ನೀಡಿರುವ 5 ಗ್ಯಾರೆಂಟಿಗಳಲ್ಲಿ ಒಂದಾಗಿರುವ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ ಎನ್ನಲಾಗುತ್ತಿದೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿರ್ಮಾನ ತೆಗೆದುಕೊಳ್ಳಲಿದ್ದಾರಂತೆ.
ಈ ಕುರಿತು ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಈ ಯೋಜನೆ ಸಂಬಂಧ ಆಪ್ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ಯಾರೂ ಹಣ ನೀಡಬೇಕಾಗಿಲ್ಲ. ಇದೊಂದು ಉಚಿತ ನೋಂದಣಿಯಾಗಿದೆ. ಜೊತೆಗೆ ಈ ಯೋಜನೆಗೆ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳುವ ಚಿಂತನೆ ಇದೆ ಅಂತಾ ಹೇಳಿದ್ದಾರೆ.