ಗೃಹಲಕ್ಷ್ಮಿ ಯೋಜನೆ: ನಾಳೆಯಿಂದ ಅರ್ಜಿ ಸಲ್ಲಿಕೆ ಶುರು

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ  5 ಗ್ಯಾರೆಂಟಿಗಳಲ್ಲಿ ಒಂದಾಗಿರುವ ಮನೆ ಒಡತಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರು ಈ ಯೋಜನೆಗೆ ಅರ್ಜಿ ಸಲ್ಲಿಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಲ್ಲ. ನಾಳೆ ಮಧ್ಯಾಹ್ನ 1.30ಕ್ಕೆ ಸಿದ್ದರಾಮಯ್ಯನವರು ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದರು.

ಅರ್ಜಿದಾರರು ಕರ್ನಾಟಕದಲ್ಲಿ ವಾಸವಾಗಿರಬೇಕು. ಮನೆಯ ಒಡತಿಯಾಗಿರಬೇಕು. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರಬೇಕು. ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು. ಇವರು ಅರ್ಜಿಯಲ್ಲಿ ಕೇಳಿರುವ ದಾಖಲೆಗಳನ್ನು ಅದರೊಂದಿಗೆ ಸಲ್ಲಿಸಬೇಕು. ಗ್ರಾಮ ಪಂಚಾಯ್ತಿ ಕೇಂದ್ರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.




Leave a Reply

Your email address will not be published. Required fields are marked *

error: Content is protected !!