ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ 23 ಶಾಸಕರ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. 23 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 93.24 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ವಿವಿಧ ಅಭಿವೃದ್ಧಿ ಹಾಗೂ ಕಟ್ಟಡ ಕಾಮಗಾರಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಶಾಸಕರಿಂದ ಕಾಮಗಾರಿಗಳ ವಿವರ ಪಡೆದು ಬಿಡುಗಡೆ ಮಾಡಲಾಗುವುದು. ಅನುದಾನದ ಮಿತಿಯಲ್ಲೇ ದರಪಟ್ಟಿ ತಯಾರಿಸತಕ್ಕದ್ದು ಎಂದು ಸೂಚಿಸಲಾಗಿದೆ.