ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಘೋಷಣೆ ಮಾಡಿದ್ದ 5 ಗ್ಯಾರೆಂಟಿಗಳಲ್ಲಿ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯೂ ಒಂದಾಗಿದೆ. ಇದೀಗ ಷರತ್ತುಗಳನ್ನು ಅನ್ವಿಯಿಸುತ್ತಿರುವುದು ಜನರನ್ನು ಕೆರಳಿಸುವಂತೆ ಮಾಡಿದೆ. ಹೀಗಾಗಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಗುರುವಾರ ಸಭೆ ನಡೆಸಿದರು.
ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಪಡೆಯಲು ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು, ಜಿಎಸ್ಟಿ ಹೊಂದಿರುವವರು ಇದರ ವ್ಯಾಪ್ತಿಗೆ ಬರುವುದಿಲ್ಲ. ಈ ಯೋಜನೆ ಬಾಡಿಗೆದಾರರಿಗೂ ಸಿಗಲಿದೆ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 17 ಅಥವ 18ರಂದು ಚಾಲನೆಗೆ ತಯಾರಿ ನಡೆಸಲಾಗುತ್ತಿದೆ. ಅರ್ಜಿದಾರರಿಗೆ ಅನಗತ್ಯ ದಾಖಲೆಗಳನ್ನು ಕೇಳಬಾರದು. ಅರ್ಜಿ ತಿರಸ್ಕಾರಗೊಂಡಲ್ಲಿ ಅದು ಸಕಾರಣಹೊಂದಿರಬೇಕು. ಕುಂಟು ನೆಪ ಹೇಳಿ ತಿರಸ್ಕಾರ ಮಾಡುವಂತಿಲ್ಲ. ಹೀಗಾಗಿ ಸೇವಾ ಸಿಂಧು ಪೋರ್ಟಲ್ ಸಾಮರ್ಥ್ಯ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತಾ ತಿಳಿಸಿದರು.