ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ: ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ನಡೆದಿದೆ. ಹೀಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜನರು ಮುಂದಾಗಬೇಕು ಎಂದು ಕೇಂದ್ರದ ಕಾಂಗ್ರೆಸ್ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಬಿಜೆಪಿ ಈಗ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಮೋದಿ ಆರಾಧಿಸುವ ಪಂಗಡವಾಗಿದೆ. ಇದು ಹೀಗೆ ಮುಂದುವರೆದರೆ ಸರ್ವಾಧಿಕಾರಿತನಕ್ಕೆ ಕಾರಣವಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಎ ರದ್ದುಗೊಳಿಸಲಾಗುವುದು.
ಮೂರನೇ ಬಾರಿಗೆ ಮೋದಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತಾರೆ. ನಾವು ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು. ಇದರ ಜೊತೆಗೆ ದೇಶದ ಎದುರಿಸುತ್ತಿರುವ ನಿರುದ್ಯೋಗ ಎನ್ನುವ ಅತಿ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಯುವ ಪೀಳಿಗಾಗಿ ಉದ್ಯೋಗದ ಭರವಸೆ ನೀಡಿದೆ. ಇನ್ನು ತಮಿಳುನಾಡಿನಲ್ಲಿ ಎಲ್ಲ 39 ಸ್ಥಾನ ಹಾಗೂ ಪುದುಚರಿಯಲ್ಲಿ 1 ಸ್ಥಾನ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದರು.