ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಮಹಿಳೆಯರಿಗೆ ಇದುವರೆಗೂ ಹಣ ಜಮಾ ಆಗಿಲ್ಲ. ಇದರಿಂದಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಂದಲ್ಲ ಒಂದು ಕಾರಣ ಹೇಳಿ ಹಣ ಹಾಕುತ್ತಿಲ್ಲವೆಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೆಲ ತಾಂತ್ರಿಕ ಕಾರಣದಿಂದ ಹಣ ಬರಲು ಸಾಧ್ಯವಾಗುತ್ತಿಲ್ಲ. ಶೀಘ್ರದಲ್ಲಿ ಅದು ಬಗೆ ಹರಿಯಲಿದೆ. ಇದುವರೆಗೂ ಹಣ ಬರದೆ ಇರುವವರಿಗೆ ಮೂರು ತಿಂಗಳ ಹಣ ಒಟ್ಟಿಗೆ ಬರಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಜಿಲ್ಲೆಗಳ ಸಿಡಿಪಿಒಗಳ ಜೊತೆ ಸಭೆ ನಡೆಸಲಾಗಿದೆ. ಪ್ರತಿ ತಿಂಗಳು 15 ರಿಂದ 20ನೇ ತಾರೀಖನೊಳಗೆ ಹಣ ಜಮಾ ಆಗಲಿದೆ. ಫಲಾನುಭವಿಗಳು ಗೊಂದಲಕ್ಕೆ ಒಳಗಾಗಬಾರದು. ಇದುವರೆಗೂ ಹಣ ಬರದೆ ಇರುವವರಿಗೆ ಮೂರು ತಿಂಗಳ ಹಣ ಒಟ್ಟಿಗೆ ಬರಲಿದೆ ಅಂತಾ ತಿಳಿಸಿದ್ದಾರೆ.