ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾಗಿರುವ ಮನೆ ಯಜಮಾನಿಗೆ 5 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗಿದೆ. ಆದರೂ ಇದುವರೆಗೂ ಬರೋಬ್ಬರಿ 70 ಲಕ್ಷ ಮಹಿಳೆಯರಿಗೆ ಹಣವೇ ಬಂದಿಲ್ಲ.
ಇದುವರೆಗೂ 44.52 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಬಂದಿಲ್ಲ. ನೋಂದಾಯಿಸಿಕೊಂಡ ಫಲಾನುಭವಿಗಳಿಗೆಲ್ಲ ಹಣ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಹೇಳುತ್ತಿದ್ದಾರೆ. ಆದರೆ, ಹಣ ಬರದೆ ಇರುವುದಕ್ಕೆ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಆಧಾರ್, ಬ್ಯಾಂಕ್ ಕೆವೈಸಿ ಮಾಡದೆ ಇರುವವರಿಗೆ ಹಣ ಸಿಗಲ್ಲವೆಂದು ಹೇಳಲಾಗುತ್ತಿದೆ. ಹೀಗಾಗಿ ಕೆವೈಸಿ ಮಾಡಿಸಲು ಸಾರ್ವಜನಿಕರು ಪರದಾಡುತ್ತಿದ್ದಾರೆ.