ಜಿಎಸ್ ಟಿ ವಿಚಾರದಲ್ಲಿ ಕೇಂದ್ರದಿಂದ ದ್ರೋಹ: ಸೋನಿಯಾ ಗಾಂಧಿ

299

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಜ್ಯಗಳಿಗೆ ನೀಡಬೇಕಾಗಿರುವ ಜಿಎಸ್ ಟಿ ಪಾಲನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದು ರಾಜ್ಯಗಳಿಗೆ ಮಾಡಿದ ದ್ರೋಹವೆಂದು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಸಿಎಂಗಳ ಜೊತೆ ವಿಡಿಯೋ ಸಂವಾದ ನಡೆಸಿದ ಅವರು, ಜಿಎಸ್ ಟಿ ಹಾಗೂ ಜೆಇಇ, ನೀಟ್, ಯುಜಿಸಿ ಪರೀಕ್ಷೆಗಳ ಸಂಬಂಧ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು.

ರಾಜ್ಯಗಳಿಗೆ ಕೇಂದ್ರದಿಂದ ಬರಬೇಕಾದ ಜಿಎಸ್ ಟಿ ಪಾಲು ನೀಡಬೇಕು. ಈ ಬಗ್ಗೆ ಸಂಸತ್ತಿನಲ್ಲಿ ಕಾನೂನು ನಿರ್ಣಯವಾಗಿದೆ. ಒಂದು ವೇಳೆ ಕೊಡದೆ ಇದ್ರೆ, ಮೂರು ವಾರಗಳಲ್ಲಿ ಶುರುವಾಗುವ ಕಲಾಪದ ವೇಳೆ ಹೋರಾಟ ಮಾಡಬೇಕಾಗುತ್ತೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!