ಪ್ರಜಾಸ್ತ್ರ ಸುದ್ದಿ
ಮೈಸೂರು: ನೀವು ವರುಣಾ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ. ಬನ್ನಿ ಇಬ್ಬರೂ ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಕಣಕ್ಕೆ ಇಳಿಯೋಣ. ಯಾರು ಗೆಲ್ಲುತ್ತಾರೆ ನೋಡೋಣ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಸವಾಲ್ ಹಾಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡ ಏನು ಕಡಿದು ಕಟ್ಟೆ ಹಾಕಿದ್ದಾರೆ ಎನ್ನುವ ಸಿಎಂ ಹೇಳಿಕೆಗೆ ಪ್ರತ್ಯುತ್ತರ ಕೊಟ್ಟಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಸೋತ ಮೇಲೆ ಮುಗಿಯಿತು. ಎಷ್ಟು ದಿನ ಮುಖ್ಯಮಂತ್ರಿಯಾಗಿ ಆಗಿರ್ತಿರಿ. ಯಾಕೆ ಪದೆಪದೆ ಚುಚ್ಚು ಮಾತುಗಳನ್ನಾಡುತ್ತೀರಿ. 35 ಸಾವಿರ ಮತಗಳ ಅಂತರದಿಂದ ನಿಮ್ಮನ್ನು ಸೋಲಿಸಿದಾಗಲು ನಾನು ಅಗೌರವಿಂದ ಮಾತನಾಡಿಲ್ಲ ಎಂದಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಹಶೀಲ್ದಾರ್, ಬಿಇಒ ಎಲ್ಲರೂ ಮುಖ್ಯಮಂತ್ರಿ ಬಂಧುಗಳು. ನಾನು ಹೆಸರಿಗೆ ಶಾಸಕ. ನಮ್ಮ ಕ್ಷೇತ್ರದಲ್ಲಿ ಯತೀಂದ್ರ ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.