ಪ್ರಜಾಸ್ತ್ರ ಸುದ್ದಿ
ನವದೆಹಲಿ: ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಸಿಎಂ, ಇಂದಿನ ಪ್ರಧಾನಿ ಮೋದಿಗೆ ಈ ಹಿಂದೆ ಕ್ಲೀಚ್ ಚಿಟ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಕ್ಲೀನ್ ಚಿಟ್ ನೀಡಿದೆ.
ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಸೇರಿದಂತೆ 63 ಜನರ ಪಾತ್ರವಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆದು ಮೋದಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಗಲಭೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಪತ್ನಿ ಜಾಕಿಯಾ ಜಾಫ್ರಿ ಹೈಕೋರ್ಟ್ ಮೆಟ್ಟಿಲು ಏರಿದರು.
ಗುಜರಾತ್ ಹೈಕೋರ್ಟ್ ವಿಶೇಷ ತನಿಖಾ ತಂಡ ನೀಡಿದ ವರದಿಯನ್ನು ಎತ್ತಿ ಹಿಡಿದು ಅರ್ಜಿಯನ್ನು ತಿರಸ್ಕರಿಸಿತು. ಇದಾದ ಬಳಿಕ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದರು. ಇದೀಗ ಸುಪ್ರೀಂ ಕೋರ್ಟ್ ನಿಂದಲೂ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಲಾಗಿದೆ.
2002ರಲ್ಲಿ ಗುಜರಾತ್ ನಲ್ಲಿ ಮೂರು ದಿನಗಳ ಕಾಲ ನಡೆದ ಹಿಂಸಾಚಾರದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಅದರಲ್ಲಿ ಕೊಲ್ಲಲ್ಪಟ್ಟ ಬಹುತೇಕರು ಮುಸ್ಲಿಂರಾಗಿದ್ದರು.