ಪ್ರಜಾಸ್ತ್ರ ಸುದ್ದಿ
ಧಾರವಾಡ: ನಗರದ ಕರ್ನಾಟಕ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕರ್ನಾಟಕ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮತ್ತು ಪ್ರಸ್ತುತ ಶಿಕ್ಷಕರನ್ನು ಗೌರವಿಸಲಾಯಿತು.
ಗುರುವಂದನಾ ಕಾರ್ಯಕ್ರಮದಲ್ಲಿ 1993 ರಿಂದ ಈಗಿರುವ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರನ್ನು ಸನ್ಮಾನಿಸಿದರು. ಈ ವೇಳೆ ಮಲ್ಲಿಕಾರ್ಜುನ ಮೇಣಸಿನಕಾಯಿ, ಡಾ.ಶ್ರೀಕಾಂತ ರಾಮನಗೌಡ, ಕಿರಣ ಪಾಟೀಲ, ಸಂತೋಷ ಹಿರೇಮಠ ಮತ್ತು ಕೆ.ಇ.ಬೋರ್ಡ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಆರ್.ಹದ್ಲಿ, ಶಿಕ್ಷಕರಾದ ಎನ್.ಜಿ.ಗಲಗಲಿ, ನಾಡಗೌಡ, ಮತ್ತು ಕೆ.ಇ.ಬೋರ್ಡ್ ಪ್ರೌಢಶಾಲೆಯ ಕಾರ್ಯದರ್ಶಿಗಳು ಸೇರಿದಂತೆ 1993ರ ಬ್ಯಾಚಿನ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಹಾಜರಿದ್ದರು.