ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೇ ಶುರು

118

ಪ್ರಜಾಸ್ತ್ರ ಸುದ್ದಿ

ವಾರಣಾಸಿ: ವಿವಾದಿತ ಕೇಂದ್ರವಾಗಿರುವ ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೇ ಕೆಲಸ ಸೋಮವಾರ ಮುಂಜಾನೆಯಿಂದ ಶುರುವಾಗಿದೆ. ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸರ್ವೇ ಕಾರ್ಯ ನಡೆಯುತ್ತಿರುವುದರಿಂದ ಮಸೀದಿ ಸುತ್ತ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಪುರಾತತ್ವ ಇಲಾಖೆಯ 35ಕ್ಕೂ ಹೆಚ್ಚು ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಯ ಫೋಟೋ, ವಿಡಿಯೋ ಸೇರಿದಂತೆ ವಿಸ್ತೃತರ್ಜಿವಾದ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.

ಮಸೀದಿಯ ವಝಖಾನಾದಲ್ಲಿ ಶಿವಲಿಂಗವಿದೆ ಎಂದು ಅರ್ಜಿ ಸಲ್ಲಿಸಲಾಗಿದೆ. ಹಿಂದೂ ಅರ್ಜಿದಾರರ ಪರವಾಗಿ ಮದನ್ ಮೋಹನ್ ಯಾದವ್ ವಾದ ಮಂಡಿಸುತ್ತಿದ್ದಾರೆ. ಸಮೀಕ್ಷೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಶುಕ್ರವಾರ ಸೂಚನೆ ನೀಡಿತ್ತು. ಅದರಂತೆ ಇಂದು ಸಮೀಕ್ಷೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!