ಜ್ಞಾನವಾಪಿ ಮಸೀದಿ ಪ್ರಕರಣ: ಸರ್ವೇಗೆ ಕೋರ್ಟ್ ಗೆ ಒಪ್ಪಿಗೆ

316

ಪ್ರಜಾಸ್ತ್ರ ಸುದ್ದಿ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೇ 17ರೊಳಗೆ ವಿಡಿಯೋ ಸರ್ವೇ ಮುಗಿಸಬೇಕು ಎಂದು ಕೋರ್ಟ್ ಆದೇಶಿಸಿದೆ.

ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಹಿಂಭಾಗದ ಹಿಂದೂ ದೇವಾಲಯದಲ್ಲಿ ವರ್ಷವಿಡಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕೋರಿ ಐವರು ಹಿಂದೂ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ಮೇಲೆ ಪರಿಶೀಲನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಕೋರ್ಟ್ ಹೇಳಿತ್ತು.

ಸಮೀಕ್ಷೆಯ ಮೇಲ್ವಿಚಾರಣೆ ನಡೆಸುತ್ತಿರುವ ಅಧಿಕಾರಿಯನ್ನು ಬದಲಿಸಬೇಕೇ ಹಾಗೂ ಮಸೀದಿ ಒಳಗಡೆ ವಿಡಿಯೋಗ್ರಫಿಗೆ ಅನುಮತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲಾಯಿತು. ಮೇ 17ರೊಳಗೆ ವಿಡಿಯೋ ಸರ್ವೇ ನಡೆಸಿ ಸಂಪೂರ್ಣ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!