ಹಗರಿಬೊಮ್ಮನಹಳ್ಳಿ ಬಂದ್ ಗೆ ಕರೆ

309

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಶಾಸಕ ಭೀಮಾ ನಾಯ್ಕ ವರ್ತನೆ ಖಂಡಿಸಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ನವೆಂಬರ್ 11ಕ್ಕೆ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಅಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಮರವಣಿಗೆ ಹಮ್ಮಿಕೊಳ್ಳಲಾಗಿದೆ.

ಎಲ್ಲೆಡೆ ಹರಿದಾಡಿದ ವಿಡಿಯೋ

ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ವೇಳೆ ಶಾಸಕ ಭೀಮಾ ನಾಯ್ಕ, ಬಿಜೆಪಿ ಕಾರ್ಯಕರ್ತರ ಮೇಲೆರಗಿ ಹೋಗಲು ಮುಂದಾಗಿದ್ರಂತೆ. ಅಲ್ದೇ, ತೋಳು ತಟ್ಟಿ ಹಲ್ಲೆಗೆ ಯತ್ನಿಸಿದ್ರು ಎನ್ನಲಾಗ್ತಿದೆ. ಇದನ್ನ ವಿರೋಧಿಸಿ ಬಿಜೆಪಿ ವತಿಯಿಂದ ನವೆಂಬರ್ 11ಕ್ಕೆ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಗೆ ಕರೆ ನೀಡಿದ್ದು, ಎಲ್ಲರೂ ಸಹಕರಿಸಬೇಕೆಂದು ಮಾಜಿ ಶಾಸಕ ನೇಮಿರಾಜ ಮನವಿ ಮಾಡಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು ಮಾಡಿಕೊಂಡಿದ್ದ ವಿಡಿಯೋ ಎಲ್ಲೆಡೆ ಹರಿದಾಡಿದೆ. ಅದು ಶಾಸಕ ಭೀಮಾ ನಾಯ್ಕ ಪುತ್ರ ಅಶೋಕನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎನ್ನಲಾಗ್ತಿದೆ. ಶಾಸಕ ತೋಳು ತಟ್ಟುತ್ತಿರುವುದು ರೆಕಾರ್ಡ್ ಆಗಿದೆ.




Leave a Reply

Your email address will not be published. Required fields are marked *

error: Content is protected !!