ಫೆ.20ರಂದು ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಫೆಬ್ರವರಿ 20ರಂದು ರಾಜ್ಯ ಸರ್ಕಾರದಿಂದ ಹಳ್ಳಿ ಕಡೆ ನಡೆಯಿರಿ ಅನ್ನೋ ಕಾರ್ಯಕ್ರಮ ಮಾಡಲಾಗ್ತಿದೆ. ಅಂದು ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ರಾಜ್ಯದ 227 ಹಳ್ಳಿಗಳಿಗೆ ಜಿಲ್ಲಾಧಿಕಾರಿ, ಉಪ ವಿಭಾಗೀಯ ಅಧಿಕಾರಿ, ತಹಶೀಲ್ದಾರ್ ಅವರು ಭೇಟಿ ನೀಡಲಿದ್ದಾರೆ. ಈ ವೇಳೆ ವೃದ್ಧಾಪ್ಯ ವೇತನ, ಖಾತೆ, ಪಿಂಚಣಿ, ಪಹಣಿ, ವಿಕಲಚೇತನರ ಸಮಸ್ಯೆಗಳನ್ನ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡಲು ಆದೇಶ ಹೊರಡಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!