ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಸಂಗೀತ ದಿಗ್ಗಜ ಹಂಸಲೇಖ ಅವರು ಆಡಿದ ಮಾತುಗಳು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸಮಾನತೆ, ಸಂವಿಧಾನ, ಅಸ್ಪೃಷ್ಯತೆ ನಿವಾರಣೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದ್ದಾರೆ.
ಈಗ ಇದೆ ವಿಚಾರವಾಗಿ ಅವರು ಕ್ಷಮೆ ಕೇಳಿದ್ದಾರೆ. ನಾನೊಬ್ಬ ಸಂಗೀತಗಾರ. ನನಗ್ಯಾಕೆ ಈ ಟ್ರೋಲ್ ಗಳೆಲ್ಲ. ನನ್ನ ಮಾತುಗಳು ನನ್ನ ಹೆಂಡತಿಗೂ ಸಹ ಇಷ್ಟವಾಗಲಿಲ್ಲ. ಅವಳು ಸಹ ಪ್ರತಿಭಟಿಸಿದಳು ಎಂದು ಹೇಳಿದ್ದಾರೆ. ಈ ವಿಚಾರವು ಸಹ ಚರ್ಚೆಗೆ ಕಾರಣವಾಗಿದೆ. ಅವರ ಪರ ಹಾಗೂ ವಿರೋಧದ ಮಾತುಗಳು ಕೇಳಿ ಬರುತ್ತಿವೆ.