ಪ್ರಜಾಸ್ತ್ರ ಸುದ್ದಿ
ಮೈಸೂರು: ಈ ಬಾರಿಯ ಮೈಸೂರು ದಸರಾ ಉದ್ಘಾಟನೆಯನ್ನು ಖ್ಯಾತ ಸಂಗೀತ ನಿರ್ದೇಶಕ, ಗೀತರಚನೆಕಾರ ಹಂಸಲೇಖ ಅವರು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಳೆ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಇದರ ಸಿದ್ಧತೆ ಜೋರಾಗಿದೆ. ಇತ್ತ ಸಿಎಂ, ಡಿಸಿಎಂ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂಸಲೇಖ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ವಿರೋಧ ಪಕ್ಷದವರು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನಿಸಿದರೂ ನಾವು ಹತ್ತಿರವಾಗುತ್ತಲೇ ಇರುತ್ತೇವೆ ಎಂದರು.