ಬೆಂಗಳೂರು: ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ನಿಧನ. 82 ವರ್ಷದ ಭಾರದ್ವಾಜ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಇಂದು ಸಂಜೆ ನಿಧನರಾಗಿದ್ದಾರೆ.
2009-2014ರ ವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ರು. ಹೆಚ್ಚುವರಿಯಾಗಿ 2012-13ರ ವರೆಗೆ ಕೇರಳ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ರು. ನಾಳೆ ದೆಹಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.