ಪ್ರಜಾಸ್ತ್ರ ಸುದ್ದಿ
ಹಾವೇರಿ: ಹಾನಗಲ್ ವಿಧಾನಸಭೆ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಯಾಗಿ ಪ್ರಚಾರ ಕಾರ್ಯ ನಡೆಸಿದರು. ಬಹಿರಂಗ ಪ್ರಚಾರಕ್ಕೆ ಕೆಲ ದಿನಗಳು ಉಳಿದಿದ್ದರಿಂದ ಭರ್ಜರಿ ಮತ ಬೇಟೆ ನಡೆಸಿದ್ದಾರೆ.
ಅಕ್ಕಿ ಹಾಲೂರು, ಬೆಳಗಾಲ ಪೇಟೆ, ಹೆರೂರ, ಚಿಕ್ಕಾಂಶಿ ಹೆಸೂರ, ಬಮ್ಮನಹಳ್ಳಿ, ಮಕರವಳ್ಳಿ ಸೇರಿದಂತೆ ಹಲವು ಕಡೆ ಭರ್ಜರಿ ರೋಡ್ ಶೋ ನಡೆಸಿದರು. ಸಿಎಂ ಹಾಗೂ ಮಾಜಿ ಸಿಎಂ ಒಟ್ಟಿಗೆ ಕಾಣಿಸಿಕೊಂಡಿದ್ದರಿಂದ ಹಾನಗಲ್ ನಲ್ಲಿ ಕಂಪ್ಲೀಟ್ ಬಿಜೆಪಿಮಯವಾಗಿದೆ.
ಬುಧವಾರ, ಗುರುವಾರ ಸಿಂದಗಿಯಲ್ಲಿ ಪ್ರಚಾರ ನಡೆಸಿದ ಬಿಎಸ್ವೈ ಇಂದು ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರವಾಗಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಈ ವೇಳೆ ಸಚಿವರಾದ ಮುರುಗೇಶ್ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಶಾಸಕರು ಸಾಥ್ ನೀಡಿದರು.