ಹಾನಗಲ್ ಉಪ ಕದನ: ಮೋದಿ-ಬೊಮ್ಮಾಯಿ ವಿರುದ್ಧ ಸುರ್ಜೆವಾಲ್ ಕಿಡಿ

203

ಪ್ರಜಾಸ್ತ್ರ ಸುದ್ದಿ

ಹಾನಗಲ್: ವಿಜಯಪುರದ ಸಿಂದಗಿ ಹಾಗೂ ಹಾವೇರಿಯ ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ್, ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ದೇಶಕ್ಕೆ ಹಾನಿಕಾರಕ ಎಂದರು.

ಬೆಲೆ ಏರಿಕೆಯಿಂದ ಜನರು ಒದ್ದಾಡುತ್ತಿದ್ದಾರೆ. ರೈತರು, ಕೂಲಿ ಕಾರ್ಮಿಕರು, ದಲಿತರು, ಹಿಂದುಳಿದವರು ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ರೈತರ, ಕಾರ್ಮಿಕರ, ದಲಿತರ ಸಾವುಗಳಿಗೆ ಬೆಲೆ ಇಲ್ಲದಾಗಿದೆ. ಎಲ್ಲದಕ್ಕೂ ಮೌನವಾಗಿರುವ ಪ್ರಧಾನಿ ಮೋದಿಯಿಂದ ದೇಶಕ್ಕೆ ಹಾನಿಯಿದೆ. ಈ ಉಪ ಚುನಾವಣೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಬೇಕು ಎಂದರು.




Leave a Reply

Your email address will not be published. Required fields are marked *

error: Content is protected !!