ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ರಾಜ್ಯದಲ್ಲಿ ಅತ್ಯಾಚಾರಿಗಳಿಗೆ, ಅಪರಾಧಿಗಳಿಗೆ ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಶನಿವಾರ ಮುಂಜಾನೆ ನಗರದಲ್ಲಿ ಮಾತನಾಡಿದ ಅವರು, ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತಾರ್ತಿಕ ಅಂತ್ಯದವರೆಗೂ ಒಯ್ಯಲು ಕಾನೂನು ಹೋರಾಟ ನಡೆಸುತ್ತೇವೆ ಎಂದರು.
ಹಾನಗಲ್ ಪ್ರಕರಣದ ಬಳಿಕ ಇತರೆ ಕಡೆ ನಡೆದ ಪ್ರಕರಣಗಳು ಬೆಳಕಿಗೆ ಬರುತ್ತೀವೆ. ಹಾನಗಲ್ ಅತ್ಯಾಚಾರ ಪ್ರಕರಣವನ್ನು ಎಸ್ಐಟಿಗೆ ಕೊಡಿ ಎಂದರೂ ಸರ್ಕಾರ ಕೇಳುತ್ತಿಲ್ಲ. ಪೊಲೀಸರು ಕಣ್ಣು ಮುಚ್ಚಿ ಕುಳಿತ್ತಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಮುಚ್ಚಿ ಹಾಕಲು ನೋಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ ಪರಿಣಾಮ ಹೀಗೆಲ್ಲ ನಡೆಯುತ್ತಿದೆ ಅಂತಾ ಆರೋಪಿಸಿದರು. ಅಪರಾಧಿಗಳ ರಕ್ಷಣೆಗೆ ಸರ್ಕಾರವೇ ನಿಂತಿದೆ ಅಂತಾ ಹೇಳಿದರು.