ತವರು ಕ್ಷೇತ್ರದಲ್ಲಿ ಸಿಎಂಗೆ ಮುಖಭಂಗ: ‘ಕೈ’ ಹಿಡಿದ ಮತದಾರ

228

ಪ್ರಜಾಸ್ತ್ರ ಸುದ್ದಿ

ಹಾನಗಲ್: ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಗೆ ಸೋಲಾಗಿದೆ. ಈ ಮೂಲಕ ತವರ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿಗೆ ಬಾರೀ ಮುಖಭಂಗವಾಗಿದೆ.

ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಕಳೆದ ಬಾರಿಯ ಸೋಲಿನ ಸೇಡನ್ನು ಶ್ರೀನಿವಾಸ್ ಮಾನೆ ಈಗ ತೀರಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾನೆ 87,113 ಮತಗಳು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಶಿವರಾಜ್ ಸಜ್ಜನರ್ 79,513 ಮತಗಳು ಹಾಗೂ ಜೆಡಿಎಸ್ ಅಭ್ಯರ್ಥಿ 921ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!