ಪ್ರಜಾಸ್ತ್ರ ಸುದ್ದಿ
ಸಿಂದಗಿ ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಐಬಿ ಆವರಣದಲ್ಲಿರುವ ಜೈ ಹನುಮಾನ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಬೆಳಗ್ಗೆಯಿಂದಲೇ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತಿದೆ. ಭಕ್ತರು ದಂಡು ನಿಧಾನವಾಗಿ ಹರಿದು ಬರುತ್ತಿದೆ.
ಈ ದೇವಸ್ಥಾನಕ್ಕೆ ಸುಮಾರು 40ಕ್ಕೂ ಅಧಿಕ ವರ್ಷಗಳ ಇತಿಹಾಸವದೆಇ 1982ರಿಂದಲೇ ಇಲ್ಲಿ ಹನುಮ ಮಂದಿರ ಸಣ್ಣ ಪ್ರಮಾಣದಲ್ಲಿ ಇತ್ತು. ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ದೇವಸ್ಥಾನ ನಿರ್ಮಸಲಾಗಿದೆ. ಪುಟ್ಟದಾದ ಗಾರ್ಡನ್ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಇಲ್ಲಿಗೆ ಬರುವ ಭಕ್ತರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಇನ್ನು ಜೈ ಹನುಮಾನ ಕಮಿಟಿಯನ್ನು ನಿರ್ಮಿಸಿಕೊಂಡು ಧಾರ್ಮಿಕ ಕೈಂಕರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಗೊಳ್ಳಾಲಪ್ಪಗೌಡರು ಅಧ್ಯಕ್ಷರಾಗಿದ್ದಾರೆ. ಇದರಲ್ಲಿ ನಿವೃತ್ತ ನೌಕರರು, ಊರಿನ ಗಣ್ಯರು ಸದಸ್ಯರಿದ್ದಾರೆ. ಇವರೆಲ್ಲ ಕೂಡಿಕೊಂಡು ಸದಾ ಒಂದಲ್ಲ ಒಂದು ಚಟುವಟಿಕೆ ಮಾಡಿಕೊಂಡು ಬರುತ್ತಿದ್ದಾರೆ. ಇಂದು ಡಾ.ರವಿ ಬಿರಾದಾರ ಎಂಬುವರ ಪ್ರಸಾದದ ವ್ಯವಸ್ಥೆ ಮಾಡಿದ್ದಾರೆ.