ಪ್ರಜಾಸ್ತ್ರ ಸುದ್ದಿ
ಹಾಸನ: ತನ್ನನ್ನು ಪ್ರೀತಿಸುವಂತೆ ಯುವಕನೊಬ್ಬ ಪೀಡಿಸುತ್ತಿದ್ದ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ. ಸಂಗೀತಾ(21) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.
ಇತ್ತೀಚೆಗೆ ಯುವತಿ ಬೇಲೂರಿನ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬಂದಿದ್ದಾಗ ಅವಾಚ್ಯ ಶಬ್ಧಗಳಿಂದ ಬೈದಿದ್ದಾನೆ. ನನ್ನನ್ನು ಪ್ರೀತಿ ಮಾಡುವುದಿಲ್ಲವೆಂದಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಶಿವು ಎನ್ನುವ ಯುವಕ, ಸಂಗೀತಾಳಿಗೆ ಪ್ರೀತಿಸುತ್ತಿರುವುದಾಗಿ ಗ್ರಾಮದಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದನಂತೆ. ಯುವತಿಯ ಮನೆಯವರಲ್ಲಿಯೂ ಮದುವೆಯ ಪ್ರಸ್ತಾಪ ಮಾಡಿದ್ದನಂತೆ. ಇದಕ್ಕೆ ಅವರ ಒಪ್ಪಿಕೊಂಡಿಲ್ಲ. ಹೀಗಾಗಿ ಆಕೆಗೆ ಪೀಡಿಸಲು ಶುರು ಮಾಡಿದ್ದಾನೆ. ಈಗ ನೋಡಿದರೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.