ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಔಟ್

330

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಭಾರತದ ನೆಲದಲ್ಲಿ ಭರ್ಜರಿಯಾಗಿ ನಡೆದಿದೆ. ಭಾರತ ಇದುವರೆಗೂ ಆಡಿರುವ ಏಳೂ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 14 ಪಾಯಿಂಟ್ ಗಳೊಂದಿಗೆ ಟಾಪ್ ಒನ್ ರಲ್ಲಿ ಭದ್ರವಾಗಿ ಕುಳಿತಿದೆ. ಸೆಮಿ ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿ ಹೊರ ಹೊಮ್ಮಿದೆ.

ಭರ್ಜರಿ ಫಾರ್ಮ್ ನಲ್ಲಿರುವ ಟೀಂ ಇಂಡಿಯಾದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಪಾಂಡ್ಯ ಜಾಗಕ್ಕೆ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡು ಹೊರ ನಡೆದರು. ಅಲ್ಲಿಂದ ಉಳಿದ ಪಂದ್ಯಗಳಿಗೆ ಅಲಭ್ಯರಾದರು.

ಇದೀಗ ಪಾಂಡ್ಯ ಗುಣಮುಖರಾಗಲು ಸಮಯ ತೆಗೆದುಕೊಳ್ಳುತ್ತೆ. ಹೀಗಾಗಿ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಬಂದಿದೆ. ಹೀಗಾಗಿ ಆಯ್ಕೆ ಮಂಡಳಿ ಪಾಂಡ್ಯ ಜಾಗಕ್ಕೆ ಕನ್ನಡ ನೆಲದ ಆಟಗಾರ ಪ್ರಸಿದ್ಧ ಕೃಷ್ಣ ಆಯ್ಕೆ ಮಾಡಲು ಮುಂದಾಗಿದೆ. ಪ್ರಸಿದ್ಧ ಕೃಷ್ಣ ಇಂಡಿಯಾ ಪರ 17 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದು 29 ವಿಕೆಟ್ ಪಡೆದಿದ್ದಾರೆ. ಈಗಾಗ್ಲೇ ಕೆ.ಎಲ್ ರಾಹುಲ್ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಪ್ರಸಿದ್ಧ ಕೃಷ್ಣ ಸೇರ್ಪಡೆಯಾದರೆ ಇಬ್ಬರು ಕನ್ನಡಿಗರು ವಿಶ್ವಕಪ್ ಟೂರ್ನಿಯಲ್ಲಿ ಕಮಾಲ್ ಮಾಡಬಹುದು.




Leave a Reply

Your email address will not be published. Required fields are marked *

error: Content is protected !!