ಪ್ರಜಾಸ್ತ್ರ ಸುದ್ದಿ
ಚಂಡೀಗಢ: ಬಿಜೆಪಿ ಬೆಂಬಲ ನೀಡಿದ್ದ ಮೂವರು ಪಕ್ಷೇತರ ಶಾಸಕರು ತಮ್ಮ ಬೆಂಬಲ ವಾಪಸ್ ಪಡೆದ ಹಿನ್ನಲೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಬಹುಮತ ಸಾಬೀತಿಗೆ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ.
ಹರಿಯಾಣದಲ್ಲಿ ರಾಷ್ಟ್ರಪತಿ ಆಡಳಿತ ಹೆರಬೇಕು. ನಂತರ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಸ್ವತಃ ಬಿಜೆಪಿ ಮಾಜಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲ, ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ಪತ್ರ ಬರೆದು ವಿಶ್ವಾಸಮತ ಸಾಬೀತಿಗೆ ಒತ್ತಾಯಿಸಿದ್ದಾರೆ.
ರೈತರ ವಿಚಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಡೆ ಖಂಡಿಸಿ ಪಕ್ಷೇತರ ಶಾಸಕರಾದ ಧರಂಪಾಲ್ ಗೊಂಡಾರ್, ರಣಧೀರ್ ಸಿಂಗ್ ಗೊಲ್ಲೆನ್, ಸೋಂಬಿರ್ ಸಾಂಗ್ವಾನ್ ಬಿಜೆಪಿ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೆ. ಇನ್ನು ಜೆಜೆಪಿ ಸಹ ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದಿದೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ಪತನವಾಗಲಿದೆ ಎಂದು ಹೇಳಲಾಗುತ್ತಿದೆ.