ಚಂಡಿಗಢ: ಹರಿಯಾಣದಲ್ಲಿ ಸರ್ಕಾರ ರಚನೆಯ ಪಾಲಿಟಿಕ್ಸ್ ಕೊನೆಯ ಹಂತಕ್ಕೆ ಬಂದಿದೆ. ಕಮಲ ಪಡೆ ಮತ್ತೊಮ್ಮೆ ಸರ್ಕಾರ ರಚನೆಗೆ ಮುಂದಾಗಿದೆ. ಬಿಜೆಪಿಗೆ ಜೆಜೆಪಿ ನಾಯಕ ದುಷ್ಯಂತ ಚೌಟಾಲಾ ಬೆಂಬಲ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮನೋಹರ ಲಾಲ್ ಖಟ್ಟರ್ ಅವರನ್ನ ಆಯ್ಕೆ ಮಾಡಲಾಗಿದೆ.
ಚಂಡಿಗಢದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೋರಾಗಿ ನಡೆಯಲಿದೆ. ಹೀಗಾಗಿ ಖಟ್ಟರ್ ಎರಡನೇ ಬಾರಿಗೆ ಸಿಎಂ ಆಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಂತಾ ಹೇಳಲಾಗ್ತಿದೆ.